21 ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ. 22 ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ. 23 ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
24 "ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. 25 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು. 26 ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ. 27 ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.
28 "ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ. 29 ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು. 30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.
31 "ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.