38 ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, "ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು. 39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ. 40 ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ," ಎಂದನು.
41 ಯೇಸು, "ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?" ಎಂದು ಹೇಳಿ, "ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ," ಎಂದರು.
42 ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು. 43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.
ಯೇಸು ತಮ್ಮ ಮರಣವನ್ನು ಎರಡನೆಯ ಬಾರಿ ಮುಂತಿಳಿಸಿದ್ದು
ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,