ನ್ಯಾಯತೀರ್ಪು ಮತ್ತು ಒಡಂಬಡಿಕೆಯ ನವೀಕರಣ
1 "ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು," ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. 2 ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.