ಬಲೆಯ ಸಾಮ್ಯ
47 "ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. 48 ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ. 49 ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, 50 ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು," ಎಂದು ಹೇಳಿದರು.