16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ. 17 ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!