12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
13 ಯಾರಿಗಾದರೂ ಶೋಧನೆ ಬಂದಾಗ, "ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು," ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ. 14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು. 15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.