5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು. 6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. 7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ. 8 ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.