ತಾಳ್ಮೆಯ ಅವಶ್ಯಕತೆ
7 ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. 8 ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.